ಬೇಲೂರು: ಕಾಫಿ ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದ ತೋಟದ ಮಾಲೀಕನನ್ನು ಒಂಟಿಸಲಗವೊಂದು ಅಟ್ಟಾಡಿಸಿರುವ ಘಟನೆ ನಡೆದಿದೆ. ತಾಲೂಕಿನ ಚೀಕನ ಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಬೆಳಗ್ಗೆ ತೋಟದಲ್ಲಿ ವಾಕ್ ಮಾಡುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಎದುರುಗಡೆ ಬಂದ ಪೆನ್ಸಿಲ ಕೊರೆ ಎಂಬ ಹೆಸರಿನ ಒಂಟಿ ಸಲಗ ಕಂಡು ತೋಟದ ಮಾಲೀಕ ಕಾಲ್ಕಿತ್ತಿದ್ದಾನೆ. ಆತನನ್ನು ಒಂಟಿ ಸಲಗ ಅಟ್ಟಿಸಿಕೊಂಡು ಹೋಗಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕಾಡಾನೆ ಓಡಿಸಿಕೊಂಡು ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕಾಫಿ ತೋಟದ ಮಾಲೀಕನನ್ನು ಅಟ್ಟಾಡಿಸಿದ ಒಂಟಿ ಸಲಗ

Photo Credit :
Bharath
MANY DROPS MAKE AN OCEAN
Support NewsKarnataka's quality independent journalism with a small contribution.