News Karnataka
ಸಿಟಿಜನ್ ಕಾರ್ನರ್

ಬಾಲಗಂಗಾಧರನಾಥ ಸ್ವಾಮೀಜಿಯವರ ಜನ್ಮ ಜಯಂತಿ ಆಚರಣೆ

The 28th birth anniversary of Shri Balagangadharnath Mahaswamiji was celebrated in near Hemavati Statue of Hassan.
Photo Credit : Bharath

ಹಾಸನ: ಯುಗಯೋಗಿ, ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ೭೮ನೇ ಜನ್ಮ ಜಯಂತಿಯನ್ನು ಮಾಜಿ ಶಾಸಕ ದಿವಂಗತ ಎಚ್.ಎಸ್ ಪ್ರಕಾಶ್ ಕುಟುಂಬ ಸದಸ್ಯರು ಹಾಗೂ ಮಠದ ಸದ್ಭಕ್ತರು ನಗರದ ಹೇಮಾವತಿ ಪ್ರತಿಮೆ ಬಳಿ ಸಾವಿರಾರು ಜನರಿಗೆ ಅನ್ನದಾನ ಮಾಡುವ ಮೂಲಕ ಆಚರಿಸಿದರು.

ಶ್ರೀಗಳ ಭಾವಚಿತ್ರಕ್ಕೆ ಶ್ರದ್ಧಾ ಭಕ್ತಿಯಿಂದ ಪೂಜೆ ಸಲ್ಲಿಸಿ ಮಹಾಮಂಗಳಾರತಿ ನೆರವೇರಿಸಲಾಯಿತು. ಈ ವೇಳೆ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ.ಎಚ್.ಎಲ್ ಮಲ್ಲೇಶಗೌಡ, ಶ್ರೀ ಡಾ.ಬಾಲಗಂಗಾಧರನಾಥ ಸ್ವಾಮೀಜಿಯವರು ಈ ಸಮಾಜಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರು ಬಹುವಿಧ ದಾಸೋಹಿಗಳಾಗಿ ನಾಡಿಗೆ ನೀಡಿರುವ ಕೊಡುಗೆ ಮಹತ್ತರವಾದುದು ಎಂದರು.

ಜಿ.ಪಂ ಮಾಜಿ ಉಪಾಧ್ಯಕ್ಷ ಹೆಚ್.ಪಿ. ಸ್ವರೂಪ ಮಾತನಾಡಿ, ಶ್ರೀ ಅವರು ಒಂದು ಸಮುದಾಯಕ್ಕೆ ಸೀಮಿತವಾಗದೇ ಇಡೀ ಸಮಾಜದಲ್ಲಿ ನೊಂದ ವರ್ಗದ ಜನತೆಗೆ ದನಿಯಾದರು. ಶ್ರೀ ಮಠದಲ್ಲಿ ಸಾವಿರಾರು ಬಡ ವಿದ್ಯಾರ್ಥಿಗಳಿಗೆ ಅವರು ನೀಡಿದ ವಿದ್ಯಾದಾನ ಅವರ ಹೆಸರು ಶಾಶ್ವತವಾಗಿ ಉಳಿಯುವಂತೆ ಮಾಡಿದೆ ಎಂದು ತಿಳಿಸಿದರು.

ಈ ವೇಳೆ ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಜಿ.ಎಲ್ ಮುದ್ದೇಗೌಡ, ಕಾರ್ಯದರ್ಶಿ ಅಪ್ಪೇಗೌಡ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ರಘುಗೌಡ, ನಗರಸಭೆ ಮಾಜಿ ಅಧ್ಯಕ್ಷ ಎಚ್.ಎಸ್. ಅನಿಲ್ ಕುಮಾರ, ನಗರಸಭೆ ಸದಸ್ಯ ಚಂದ್ರೇಗೌಡ, ಕುವೆಂಪು ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಬಿ.ಈ ಶಿವರಾಮೇಗೌಡ, ಶ್ರೀ ಮಠದ ವ್ಯವಸ್ಥಾಪಕ ಚಂದ್ರಶೇಖರ, ಕಸಾಪ ಗೌರವ ಕಾರ್ಯದರ್ಶಿ ಬಿ.ಆರ್ ಬೊಮ್ಮೇಗೌಡ, ಟೈಮ್ಸ್ ಸಂಸ್ಥೆಯ ಕಾರ್ಯದರ್ಶಿ ಗಂಗಾಧರ, ಆರ್.ಬಿ ಶಂಕರ ಇತರರು ಹಾಜರಿದ್ದರು.

MANY DROPS MAKE AN OCEAN
Support NewsKarnataka's quality independent journalism with a small contribution.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *