News Karnataka
ಸಿಟಿಜನ್ ಕಾರ್ನರ್

ವಿದ್ಯಾರ್ಥಿ ನಿಲಯ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ

MLA HD Revanna inaugurated the construction of student hostel building and various sub-divisional-offices in Holenarasipur.
Photo Credit : Bharath

ಹೊಳೆನರಸೀಪುರ: ಪಟ್ಟಣದಲ್ಲಿ ವಿದ್ಯಾರ್ಥಿ ನಿಲಯ ಕಟ್ಟಡ ನಿರ್ಮಾಣಕ್ಕಾಗಿ ಭೂಮಿ ಪೂಜೆ ಮತ್ತು ನಾನಾ ಉಪವಿಭಾಗೀಯ ಕಚೇರಿಗಳ ಕಟ್ಟಡ ಉದ್ಘಾಟನೆಯನ್ನು ಶಾಸಕ ಎಚ್.ಡಿ.ರೇವಣ್ಣ ನೆರವೇರಿಸಿದರು.

ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪಕ್ಕದಲ್ಲಿ ೫ ಕೋಟಿ ವೆಚ್ಚದಲ್ಲಿ ೫೦೦ ವಿದ್ಯಾರ್ಥಿಗಳ ವಸತಿ ಅನುಕೂಲತೆಗಾಗಿ ಶುಕ್ರವಾರ ಬಿಸಿಎಂ ಮೆಟ್ರಿಕ್‌ ನಂತರದ ಮಹಿಳಾ ವಿದ್ಯಾರ್ಥಿ ನಿಲಯ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದರು. ಅರಕಲಗೂಡು ರಸ್ತೆಯ PWD ಇಲಾಖೆ ಆವರಣದಲ್ಲಿ ೪ ಕೋಟಿ ರೂ. ವೆಚ್ಚದಲ್ಲಿ ಲೋಕೋಪಯೋಗಿ ವಿಶೇಷ ಉಪ ವಿಭಾಗೀಯ ಕಚೇರಿ ಮತ್ತು ರಾಷ್ಟ್ರೀಯ ಹೆದ್ದಾರಿ ಉಪ ವಿಭಾಗೀಯ ಕಚೇರಿ ಉದ್ಘಾಟಿಸಿದರು.

ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಮಹಿಳಾ ವಿದ್ಯಾರ್ಥಿ ನಿಲಯದ ೨ ಅಂತಸ್ತಿನ ಕಟ್ಟಡ ನಿರ್ಮಾಣಕ್ಕೆ ೫ ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕಾಮಗಾರಿ ಪ್ರಾರಂಭಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮತ್ತೆರಡು ಅಂತಸ್ತು ನಿರ್ಮಾಣಕ್ಕಾಗಿ ಅನುದಾನ ತರಲಾಗುವುದು. ಇದರಿಂದ ಮುಂದಿನ ಶೈಕ್ಷಣಿಕ ವರ್ಷಕ್ಕೆ ಸುಸಜ್ಜಿತವಾದ ೪ ಅಂತಸ್ತಿನ ಹಾಸ್ಟೆಲ್ ಕಟ್ಟಡ ನಿರ್ಮಾಣ ಮಾಡಿದಂತಾಗುತ್ತದೆ ಎಂದರು.

ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಇಲಾಖೆ ಕಾರ್ಯಪಾಲಕ ಅಭಿಯಂತ ಹೇಮಂತ್, ಬಿಸಿಎಂ ವಿಸ್ತರಣಾಧಿಕಾರಿ ಮಂಜುನಾಥ ಹಾಗೂ ಸಹಾಯಕ ತಾಂತ್ರಿಕ ಅಭಿಯಂತರು ಹಾಜರಿದ್ದರು.

MANY DROPS MAKE AN OCEAN
Support NewsKarnataka's quality independent journalism with a small contribution.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *