News Karnataka
ಸಿಟಿಜನ್ ಕಾರ್ನರ್

ಚುನಾವಣೆ ಅಧಿಸೂಚನೆ ಹೊರಡಿಸಲು ಸಿದ್ಧತೆಗೆ ಸೂಚನೆ

Hassan DC MS Archana has suggested that all preparations should be made for the Nomination process related to the assembly elections.
Photo Credit : Bharath

ಹಾಸನ: ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ನಾಮ ಪತ್ರ ಸ್ವೀಕಾರ ಪ್ರಕ್ರಿಯೆಗೆ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಳ್ಳಿ, ಅಧಿಸೂಚನೆ ಹೊರಡಿಸುವುದು ಹಾಗೂ ಆನ್‌ಲೈನ್ ಮೂಲಕ ನಾಮಪತ್ರ ಸಲ್ಲಿಕೆಗೆ ಇರುವ ಅವಕಾಶಗಳ ಬಗ್ಗೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಅರಿವು ಮೂಡಿಸಿ ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಎಂ.ಎಸ್ ಅರ್ಚನಾ ಅವರು ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಎಲ್ಲಾ ಕ್ಷೇತ್ರಗಳ ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, ವಿಧಾನಸಭಾ ಸಾರ್ವತ್ರಿಕ ಚುನಾವಣಾ ಸಿದ್ದತೆ ಕುರಿತಂತೆ ಸಲಹೆ ಸೂಚನೆಗಳನ್ನು ನೀಡಿದರು. ಅಂಚೆ ಮತದಾನಕ್ಕೆ ಎಲ್ಲಾ ರೀತಿ ಅಗತ್ಯ ಕ್ರಮವಹಿಸಿ ಕ್ಷೇತ್ರ ಪರಿಶೀಲನೆ ಮಾಡಿಕೊಂಡು ಬಾಕಿ ಇರುವ ಅರ್ಜಿಗಳನ್ನು ಆದಷ್ಟು ಬೇಗ ಮುಕ್ತಾಯಗೊಳಿಸಿ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಎಲ್ಲಾ ತಾಲೂಕುಗಳಲ್ಲಿ, ತಾಲೂಕು ಪಂಚಾಯತ್‌ಗಳಲ್ಲಿ ಲಭ್ಯ ಇರುವ ಕ್ಯಾಮೆರಾಗಳನ್ನು ಬಳಸಿ ಎಫ್.ಎಸ್.ಟಿ ಮತ್ತಿತರ ಮಾದರಿ ನೀತಿ ಸಂಹಿತೆ ನಿಗಾ ಸಮಿತಿಗಳಿಗೆ ಒದಗಿಸಿ ಅಗತ್ಯ ಇರುವ ಕಡೆ ಹೊಸ ಕ್ಯಾಮರಾ ಖರೀದಿಸಿ ಬಳಸಿ ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.

MANY DROPS MAKE AN OCEAN
Support NewsKarnataka's quality independent journalism with a small contribution.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *