News Karnataka
ಸಿಟಿಜನ್ ಕಾರ್ನರ್

ಚೆಕ್‌ಪೋಸ್ಟ್‌ಗಳಲ್ಲಿ ಸಮನ್ವಯದಿಂದ ಕೆಲಸ ಮಾಡಲು ಸೂಚನೆ

District Collector MS Archana held a meeting of the officers and instructed them to work in coordination at the check posts.
Photo Credit : Bharath

ಹಾಸನ: ವಿಧಾನ ಸಭೆ ಸಾರ್ವತ್ರಿಕ ಚುನಾವಣೆಗೆ ನೀತಿ ಸಂಹಿತೆ ಜಾರಿಗಾಗಿ ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ ಚೆಕ್ ಪೋಸ್ಟ್‌ಗಳಲ್ಲಿ ಸಮನ್ವಯದಿಂದ ಕೆಲಸ ಮಾಡುವ ಅಗತ್ಯ ಇದೆ ಎಂದು ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚುನಾವಣೆ ಮಾದರಿ ನೀತಿ ಸಂಹಿತೆ ಪರಿಣಾಮಕಾರಿ ಅನುಷ್ಠಾನ ಕುರಿತು ಎಲ್ಲಾ ಕ್ಷೇತ್ರದ ಚುನಾವಣಾಧಿಕಾರಿಗಳು, ತಹಶೀಲ್ದಾರ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಪುರಸಭೆ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳ ಸಭೆ ನಡೆಸಿದ ಅವರು ಹಲವು ಸಲಹೆ ಸೂಚನೆಗಳನ್ನು ನೀಡಿದರು.

ಚೆಕ್ ಪೋಸ್ಟ್ ನಲ್ಲಿ ಪೊಲೀಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಬ್ಬರೂ ಕೆಲಸ ಮಾಡಬೇಕು, ಪ್ರತಿದಿನ ಪಾಳಿವಾರು ಹಾಜರಾತಿ ನಿರ್ವಹಣೆ ಮಾಡಬೇಕು ಎಂದು ಸೂಚನೆ ನೀಡಿದರು. ಎಫ್.ಎಸ್.ಟಿ ತಂಡಗಳು ಸಂಪೂರ್ಣವಾಗಿ ಕ್ಷೇತ್ರದಲ್ಲಿ ಕೆಲಸ ಮಾಡಲು ಪ್ರಾರಂಭಿಸಿ ವರದಿ ನೀಡಬೇಕು. ನೀತಿ ಸಂಹಿತೆ ಸಂಪೂರ್ಣ ಜಾರಿಯಾಗಬೇಕು ಎಂದರು. ಬಾಕಿ ಇರುವ ನಮೂನೆಗಳನ್ನು ವಿಲೇವಾರಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಎಂ. ಎಸ್ ಅರ್ಚನಾ ಸೂಚನೆ ನೀಡಿದರು.

ಎಲ್ಲಾ ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು ಮತಗಟ್ಟೆ ಪರಿಶೀಲನೆ ಮಾಡಿ, ಎಲ್ಲಾ ಸುಸ್ಥಿತಿಯಲ್ಲಿ ಇರುವುದನ್ನು ಖಾತರಿ ಪಡಿಸಿಕೊಳ್ಳಿ. ದುರಸ್ತಿ ಕಾಮಾಗಾರಿ ಪ್ರಾರಂಭ ಮಾಡಿರುವ ಬಗ್ಗೆ ವರದಿ ನೀಡಿ ಎಂದರು.

ಇದೇ ವೇಳೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್. ಪೂರ್ಣಿಮಾ ಅವರು ಮಾತನಾಡಿದರು.

MANY DROPS MAKE AN OCEAN
Support NewsKarnataka's quality independent journalism with a small contribution.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *