ಹಾಸನ: ಕಳೆದ ಬಾರಿ ಜಿಲ್ಲೆಯಲ್ಲಿ ಕಡಿಮೆ ಮತದಾನವಾಗಿದ್ದು ಶೇಕಡ ನೂರರಷ್ಟು ಮತದಾನ ಆಗುವ ನಿಟ್ಟಿನಲ್ಲಿ ನಗರದ ಬೂವನಹಳ್ಳಿ ಎಲಿಪ್ಯಾಡ್ ಆವರಣದಲ್ಲಿ ಪ್ಯಾರಾಗ್ಲೈಡಿಂಗ್ ಮೂಲಕ ವಿನೂತನ ಮತದಾನ ಜಾಗೃತಿ ಪ್ರಯೋಗಕ್ಕ್ಕೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಪ್ಯಾರಾಗ್ಲೈಡಿಂಗ್ ಮೇಲೆ ಕುಳಿತು ಭಾಗವಹಿಸುವ ಮೂಲಕ ಮತದಾನ ಜಾಗೃತಿ ಬಗ್ಗೆ ಮಾತನಾಡಿದ ಅವರು ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ವಿನೂತನವಾಗಿ ಮತದಾನದ ಬಗ್ಗೆ ಅರಿವು ಮೂಡಿಸುವುದಕ್ಕೆ ಪ್ಯಾರಾಗ್ಲೈಡಿಂಗ್ ಮೂಲಕ ಪ್ರಯೋಗ ಮಾಡಲಾಗುತ್ತಿದೆ. ನಗರ ಮತ್ತು ಸುತ್ತ-ಮುತ್ತ ಎಲ್ಲಾ ಕಡೆ ಸಂಚರಿಸುವ ಮೂಲಕ ಮತದಾನ ಅರಿವು ಮೂಡಿಸಲಿದೆ ಎಂದರು.
ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಬಿ.ಆರ್ ಪೂರ್ಣಿಮಾ ಅವರು ಮಾತನಾಡಿ ಪ್ಯಾರಾಗ್ಲೈಡಿಂಗ್ ಮೂಲಕ ವಿಶೇಷ ಪ್ರಯತ್ನ ಹಮ್ಮಿಕೊಳ್ಳುವುದರ ಮೂಲಕ ಮತದಾರರಲ್ಲಿ ಮತ ಚಲಾಯಿಸುವಂತೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ಪರಪ್ಪಸ್ವಾಮಿ ಮಾತನಾಡಿ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲಾ ಮತದಾರರಲ್ಲಿ ಮತದಾನದ ಜಾಗೃತಿ ಮೂಡಿಸುವ ಉದ್ದೇಶದಿಂದ ಎಲ್ಲೆಲ್ಲಿ ಮತದಾನ ಪ್ರಮಾಣ ಕಡಿಮೆಯಾಗಿದೆ ಅಂತಹ ಮತದಾನ ಕೇಂದ್ರಗಳಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಮೂಲಕ ಅರಿವು ಮುಡಿಸಲಾಗುತ್ತಿದೆ ಎಂದರು. ಚುನಾವಣೆ ಆಯೋಗದ ನಿರ್ದೇಶನದಂತೆ ಪ್ಯಾರಾಗ್ಲೈಡಿಂಗ್ ಮೋಟರ್ ಮೂಲಕ ಮತದಾನದ ಜಾಗೃತಿ ಮೂಡಿಸುತ್ತಿದ್ದು, ಕಡ್ಡಾಯವಾಗಿ 18 ವರ್ಷ ತುಂಬಿದ ಎಲ್ಲರೂ ಮತ ಕೇಂದ್ರಕ್ಕೆ ಬಂದು ಮತದಾನ ಮಾಡುವ ಮೂಲಕ ಶೇಕಡ ನೂರರಷ್ಟು ಮತದಾನ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್ ಪುರ್ಣಿಮಾ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಪರಪ್ಪಸ್ವಾಮಿ, ಜಿಲ್ಲಾ ವಾರ್ತಾಧಿಕಾರಿ ವಿನೋದ್ ಚಂದ್ರರವರು ಪ್ಯಾರಾಗ್ಲೈಡಿಂಗ್ ಮೋಟರ್ ಮೂಲಕ ಆಗಸದಲ್ಲಿ ಹಾರಾಡುವ ಮೂಲಕ ವಿಶೇಷವಾಗಿ ಮತದಾನ ಜಾಗೃತಿ ಮೂಡಿಸಲಾಯಿತು.