News Karnataka
Saturday, June 10 2023
ವರ್ಗೀಕೃತ

ಕೋಮುವಾದಿ ದಲಿತ ವಿರೋಧಿ ಪಕ್ಷಕ್ಕೆ ನಮ್ಮ ಬೆಂಬಲವಿಲ್ಲ: ನಾರಾಯಣ ದಾಸ್

Dalit leader Narayanadas said in a press conference that we will not support any anti Dalit party at Hassan.
Photo Credit : Bharath

ಹಾಸನ: ಜಿಲ್ಲೆಯ ದಲಿತ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರೆಲ್ಲ ಸೇರಿ ಮುಂಬರುವ ಚುನಾವಣೆಯಲ್ಲಿ ಯಾವ ಪಕ್ಷಕ್ಕೆ ಬೆಂಬಲಿಸಬೇಕು ಎಂಬುದನ್ನು ನಿರ್ಧರಿಸಲಿದ್ದೇವೆ ಎಂದು ದಲಿತ ಮುಖಂಡ ನಾರಾಯಣ ದಾಸ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ದಲಿತ ಸಂಘಟನೆಗಳು ಕೋಮುವಾದಿ ಮತ್ತು ದಲಿತ ವಿರೋಧಿ ನೀತಿ ಅನುಸರಿಸುತ್ತಿರುವ ಬಿಜೆಪಿ ಪಕ್ಷದ ವಿರುದ್ಧ ಜಾತ್ಯತೀತವಾಗಿ ನಡೆಯುವ ಪಕ್ಷದ ಪರ ನಿಲ್ಲುವ ಕುರಿತು ತೀರ್ಮಾನ ಕೈಗೊಳ್ಳಲಿದ್ದೇವೆ. ಈ ಸಂಬಂಧ ಕೆಲ ದಿನಗಳಲ್ಲಿ ಸಭೆಯನ್ನು ಆಯೋಜಿಸಲಾಗಿದ್ದು, ದಲಿತ ಸಂಘಟನೆಯ ಹಿರಿಯರು ಹಾಗೂ ಕಾರ್ಯಕರ್ತರು ಎಲ್ಲ ಸೇರಿ ಬಿಜೆಪಿ ಪಕ್ಷವನ್ನು ಹೊರತುಪಡಿಸಿ ಜಾತ್ಯಾತೀತವಾಗಿ ಚುನಾವಣಾ ಅಭ್ಯರ್ಥಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ತೀರ್ಮಾನ ಕೈಗೊಳ್ಳಲಿದ್ದೇವೆ ಎಂದರು.

ಇತ್ತೀಚೆಗೆ ಕೆಲ ದಲಿತ ಸಂಘಟನೆ ಹೆಸರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಹಾಸನ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಪರ ನಿಲ್ಲುವುದಾಗಿ ಘೋಷಣೆಯನ್ನು ಮಾಡಿದ್ದು, ಇದನ್ನು ನಾವು ಖಂಡಿಸುತ್ತೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಗದೀಶ ಚೌಡಳ್ಳಿ, ಹರೀಶ, ಚಂದ್ರು, ರಂಗಸ್ವಾಮಿ ಇದ್ದರು.

MANY DROPS MAKE AN OCEAN
Support NewsKarnataka's quality independent journalism with a small contribution.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *