News Karnataka
Saturday, June 10 2023
ಸಮುದಾಯ

ಎಸ್ಸಿ/ಎಸ್ಟಿ ಬುಡಕಟ್ಟು ಜನಾಂಗದ ಅಭ್ಯರ್ಥಿಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಲು ಒತ್ತಾಯ

It has been demanded that tribal candidates belonging to SC and ST sub-tribes should be allowed to contest elections in Hassan.
Photo Credit : Bharath

ಹಾಸನ: ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕ್ರಿಶ್ಚಿಯನ್ ಸಮುದಾಯ ಸೇರಿದಂತೆ ಎಸ್ಸಿ/ಎಸ್ಟಿ ಒಳಪಂಗಡಗಳ ಬುಡಕಟ್ಟು ಜನಾಂಗದ ಅಭ್ಯರ್ಥಿಗಳಿಗೆ ರಾಜಕೀಯ ಪಕ್ಷಗಳು ಸ್ಪರ್ಧಿಸಲು ಅವಕಾಶ ನೀಡಬೇಕು, ಇಲ್ಲವಾದರೆ ಮುಂದಿನ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧೆ ಮಾಡಲಾಗುವುದು ಎಂದು ದಲಿತ ಮುಖಂಡ ಮರಿ ಜೋಸೆಫ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಎಸ್ಸಿ/ಎಸ್ಟಿ ಒಳಪಂಗಡಗಳಲ್ಲಿ ಅಲೆಮಾರಿ, ಅರೆ ಅಲೆಮಾರಿ, ಬುಡಕಟ್ಟು, ಸೂಕ್ಷ್ಮ-ಅತಿ ಸೂಕ್ಷ್ಮ ಜಾತಿ ಸಮುದಾಯಗಳು ಇದ್ದು, ಇವರಿಗೆ ಯಾವುದೇ ರಾಜಕೀಯ ಪಕ್ಷಗಳು ಪ್ರಾಶಸ್ತ್ಯ ನೀಡುತ್ತಿಲ್ಲ. ಇದರಿಂದ ಈ ಸಮುದಾಯಗಳು ಅಭಿವೃದ್ಧಿ ಆಗದೆ ಇಂದಿಗೂ ಸಹ ತಳಮಟ್ಟದಲ್ಲೇ ಜೀವನ ನಡೆಸುವಂತಾಗಿದೆ.

ಈ ಬಾರಿಯ ಚುನಾವಣೆಯಲ್ಲಿ ಕೆಲ ಕ್ಷೇತ್ರಗಳಲ್ಲಿ ಬುಡಕಟ್ಟು ಜನಾಂಗದ ಜನರಿಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು. ಈ ಚುನಾವಣೆಯಲ್ಲಿ ಇವರಿಗೆ ಅವಕಾಶ ದೊರೆಯದಿದ್ದ ಪಕ್ಷದಲ್ಲಿ ಮುಂದಿನ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸುವ ಮೂಲಕ ತಮ್ಮ ಶಕ್ತಿ ಪ್ರದರ್ಶನವನ್ನು ಮಾಡಲಿದ್ದೇವೆ ಎಂದು ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಯುವರಾಜ, ರಘು, ರಂಗಸ್ವಾಮಿ, ಮಮತಾ, ರತನ್ ಇದ್ದರು.

MANY DROPS MAKE AN OCEAN
Support NewsKarnataka's quality independent journalism with a small contribution.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *