News Karnataka
ಕ್ರೈಂ

ವೃದ್ಧೆ ಕೊಲೆ- ಅತ್ಯಾಚಾರ ಪ್ರಕರಣ: ಆರೋಪಿ ಬಂಧನ

Superintendent of Police Hariram Shankar said that the accused has been arrested in connection with the rape and murder case of an old woman.
Photo Credit : Bharath

ಹಾಸನ: ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ಇತ್ತೀಚೆಗೆ ನಡೆದ ವೃದ್ದೆಯನ್ನು ಅಮಾನುಷ ಅತ್ಯಾಚಾರ-ಕೊಲೆ ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದರು.

ನಗರದ ತಮ್ಮ ಕಚೇರಿಯಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು ಈ ಪ್ರಕರಣ ಸಂಬಂಧ ಅರಸೀಕೆರೆ ತಾಲೂಕು ಕಣಕಟ್ಟೆ ಹೋಬಳಿ ಯರೇಹಳ್ಳಿ ಗ್ರಾಮದ ಮಿಥುನ್ ಕುಮಾರ್ (32) ಎಂಬುವರನ್ನು ಬಂಧಿಸಲಾಗಿದೆ ಎಂದರು.

ಪ್ರಕರಣದಲ್ಲಿ ಅರಸೀಕೆರೆ ತಾಲೂಕಿನ ಮಾಡಾಳು ಗ್ರಾಮದ ವೃದ್ದೆ ಗೌರಮ್ಮ(85) ಕೊಲೆಯಾದ ದುರ್ದೈವಿಯಾಗಿದ್ದು, ವೃದ್ಧೆ ಏ.1ರಂದು ಮಧ್ಯಾಹ್ನ ತನ್ನ ಜಮೀನಿನ ಬಳಿ ತೆರಳಲು ಹೋಗಿ ದಾರಿ ಗೊತ್ತಿಲ್ಲದೆ ಬೇರೆ ಕಡೆ ಹೋಗಿದ್ದ ಅಜ್ಜಿಯನ್ನು ಬಿಟ್ಟು ಬರುವುದಾಗಿ ಬೈಕಿನಲ್ಲಿ ಕರೆದೊಯ್ದ ಆರೋಪಿ ಮಿಥುನ್ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರಕ್ಕೆ ಯತ್ನ ನಡೆಸಿದ್ದಾನೆ. ಈ ವೇಳೆ ಪ್ರತಿರೋಧ ತೋರಿದ ವೃದ್ಧೆಯನ್ನು ಬರ್ಬರವಾಗಿ ಹತ್ಯೆಗೈದ ಬಳಿಕ ರಾಕ್ಷಸ ಕೃತ್ಯ ಎಸಗಿದ್ದಾನೆ.

ವೃದ್ಧೆಯನ್ನು ಕೊಂದು ಅತ್ಯಾಚಾರ ಎಸಗಿದ ಮಿಥುನ್ ಕುಮಾರ್ ಪ್ರಕರಣ ಸಂಬಂಧ ವಿಚಾರಣೆ ವೇಳೆ ತಪ್ಪು ಒಪ್ಪಿಕೊಂಡಿದ್ದಾನೆ. ಏಪ್ರಿಲ್ 2ರಂದು ಗೌರಮ್ಮ ಅವರ ಪುತ್ರ ಮಲ್ಲಿಕಾರ್ಜುನ ಅವರು ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿ ತನಿಖೆ ಕೈಗೊಂಡ ಬಳಿಕ ಅಮಾನುಷ ಘಟನೆ ಬೆಳಕಿಗೆ ಬಂದಿದೆ ಎಂದು ಎಸ್ಪಿ ತಿಳಿಸಿದರು.

ಐದು ವರ್ಷದ ಹಿಂದೆ ಇದೇ ರೀತಿಯಲ್ಲಿ ಓರ್ವ ವೃದ್ದೆಯ ಮೇಲೆ ಅತ್ಯಾಚಾರ ಯತ್ನವನ್ನು ಮಾಡಿದ್ದ ಮಿಥುನ್, ಇದೀಗ ಮತ್ತೊಂದು ಪ್ರಕರಣದಲ್ಲಿ ಭಾಗಿಯಾಗಿದ್ದು ಈತನ ವಿರುದ್ಧ ಬಾಣಾವರ ಪೊಲೀಸ್ ಠಾಣೆಯಲ್ಲಿ ಕೊಲೆ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ.

MANY DROPS MAKE AN OCEAN
Support NewsKarnataka's quality independent journalism with a small contribution.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *