News Karnataka
ರಾಜಕೀಯ

ಹಾಸನ ಜಿಲ್ಲೆಯಲ್ಲಿ ಇಂದು 21 ನಾಮಪತ್ರ ಸ್ವೀಕಾರ

A total of 21 nomination papers have been filed by 15 candidates in 7 assembly constituencies of Hassan district.
Photo Credit : Bharath

ಹಾಸನ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಹಾಸನ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ 15 ಅಭ್ಯರ್ಥಿಗಳಿಂದ ಒಟ್ಟು 21 ನಾಮಪತ್ರಗಳು ಸಲ್ಲಿಕೆಯಾಗಿವೆ.

193-ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಗಳಾಗಿ ನಟರಾಜು, ಸುಬ್ರಹ್ಮಣ್ಯ ಹಾಗೂ ಎಂ.ಜಿ ನಂಜೇಗೌಡ, ಬಿ.ಜೆ.ಪಿ ಅಭ್ಯರ್ಥಿ ಚಿದಾನಂದ ಸಿ.ಆರ್, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಪವಿತ್ರ ಜಿ.ಕೆ ಇವರು ತಲಾ ಒಂದೊಂದು ನಾಮಪತ್ರ ಸಲ್ಲಿಸಿದ್ದಾರೆ.

194- ಅರಸೀಕೆರೆ ವಿಧಾನಸಭಾ ಕ್ಷೇತ್ರಕ್ಕೆ ಬಿ.ಜೆ.ಪಿ ಪಕ್ಷದ ಜಿ.ವಿ. ಬಸವರಾಜು, ಲೋಕಶಕ್ತಿ ಪಕ್ಷದ ಅಭ್ಯರ್ಥಿ ಹೊಳೆಯಪ್ಪ, ಕೆ.ಆರ್.ಎಸ್ ಪಕ್ಷದ ಅಭ್ಯರ್ಥಿ ಉಮೇಶ್ ತಲಾ ಒಂದೊಂದು ನಾಮಪತ್ರ ಸಲ್ಲಿಸಿದ್ದಾರೆ.

195-ಬೇಲೂರು ವಿಧಾನಸಭಾ ಕ್ಷೇತ್ರಕ್ಕೆ ಬಿ.ಎಸ್.ಪಿ ಪಕ್ಷದಿಂದ ಗಂಗಧಾರ್ ಡಿ ಎಸ್ ನಾಮಪತ್ರ ಸಲ್ಲಿಸಿದ್ದಾರೆ.

197-ಹೊಳೆನರಸೀಪುರ ವಿಧಾನ ಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಶ್ರೆಯಸ್ ಎಂ. ಪಟೇಲ್ ಹಾಗೂ ಬಿ.ಎಸ್.ಪಿ ಅಭ್ಯರ್ಥಿ ತಾರೇಶ್ ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.

198-ಅರಕಲಗೂಡು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯೋಗಾರಮೇಶ್, ಪಕ್ಷೇತರ ಅಭ್ಯರ್ಥಿಗಳಾಗಿ ಎ.ಎಂ.ಮಲ್ಲೇಶ್ ಹಾಗೂ ವಿಜಯ ಭಾರತಿ, ಭಾರತೀಯ ಡಾ| ಬಿ.ಆರ್ ಅಂಬೇಡ್ಕರ್ ಜನತಾ ಪಕ್ಷದ ಅಭ್ಯರ್ಥಿ ಎಚ್.ಪಿ ಮಂಜುನಾಥ್ ತಲಾ ಒಂದೊಂದು ನಾಮಪತ್ರ ಸಲ್ಲಿಸಿದ್ದಾರೆ.

199-ಸಕಲೇಶಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಸ್ ಮಂಜುನಾಥ ಎರಡು ನಾಮಪತ್ರ ಹಾಗೂ ಪಕ್ಷೇತರ ಅಭ್ಯರ್ಥಿ ರವಿ ಜಿ.ಸಿ ಒಂದು ನಾಮಪತ್ರ ಸಲ್ಲಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಅರ್ಚನಾ ಎಂ.ಎಸ್. ಅವರು ತಿಳಿಸಿದ್ದಾರೆ.

MANY DROPS MAKE AN OCEAN
Support NewsKarnataka's quality independent journalism with a small contribution.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *