News Karnataka
Saturday, June 10 2023
ರಾಜಕೀಯ

ಭ್ರಷ್ಟಮುಕ್ತ ಆಡಳಿತಕ್ಕೆ ಪೊರಕೆ ಪರಿಹಾರ: ಎಎಪಿ ಪ್ರಚಾರ

Aam aadmi party has started campaigning in Hassan from near Hemavati statue under the slogan Broom solution for corruption free governance.
Photo Credit : Bharath

ಹಾಸನ: ಭ್ರಷ್ಟಮುಕ್ತ ಆಡಳಿತಕ್ಕೆ ಪೊರಕೆ ಪರಿಹಾರ ಎಂಬ ಧ್ಯೇಯದ ಅಡಿಯಲ್ಲಿ ಇಂದು ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಆಗಿಲೇ ಯೋಗೀಶ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷದ ವತಿಯಿಂದ ಅಬ್ಬರದ ಪ್ರಚಾರ ಆರಂಭಿಸಿದ್ದಾರೆ.

ಹೇಮಾವತಿ ಪ್ರತಿಮೆ ಬಳಿಯಿಂದ ಆರಂಭವಾದ ಪ್ರಚಾರ ಕಾರ್ಯಕ್ರಮ ನಗರದ ಪ್ರಮುಖ ರಸ್ತೆಗಳಲ್ಲಿನ ಅಂಗಡಿ ಮಳಿಗೆಗಳು ಹಾಗೂ ಬಡಾವಣೆಯ ಜನರಿಗೆ ಆಡಳಿತ ಪಕ್ಷಗಳ ವೈಫಲ್ಯ ಹಾಗೂ ಲೋಪಗಳ ಬಗ್ಗೆ ಅರಿವು ಮೂಡಿಸುವ ಜೊತೆಗೆ ಮುಂಬರುವ ಚುನಾವಣೆಯಲ್ಲಿ ಭ್ರಷ್ಟಾಚಾರದ ಮುಕ್ತ ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಈ ವೇಳೆ ಅಗಿಲೆ ಯೋಗೀಶ ಮಾತನಾಡಿ, ಭ್ರಷ್ಟ ಮುಕ್ತ ಸಮಾಜಕ್ಕೆ ಪೋರಕೆಯೆ ಪರಿಹಾರ ಎಂಬ ಘೋಷವಾಕ್ಯದ ಅಡಿಯಲ್ಲಿ ಇಂದು ಆಮ್ ಆದ್ಮಿ ಪಕ್ಷದ ವತಿಯಿಂದ ಪ್ರಚಾರ ಆರಂಭಿಸಿದ್ದು, ಜನರ ತೆರಿಗೆ ಹಣ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಜೆಸಿಬಿ ಪಕ್ಷಗಳನ್ನು ದೂರ ಇಡಬೇಕು ಎಂದರು.

ಹಾಸನ ವಿಧಾನಸಭಾ ಕ್ಷೇತ್ರದ ಜನತೆಗೆ ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸಲು ಆಮ್ ಆದ್ಮಿ ಪಕ್ಷವೇ ಸೂಕ್ತ ಈ ನಿಟ್ಟಿನಲ್ಲಿ ನಗರದ ಎಲ್ಲಾ ಜನರಲ್ಲಿ, ಮುಂಬರುವ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತಗಳನ್ನು ಆಮ್ ಆದ್ಮಿ ಪಕ್ಷಕ್ಕೆ ನೀಡುವ ಮೂಲಕ ಬೆಂಬಲಿಸುವಂತೆ ಮನವಿ ಮಾಡಿದರು.ಈ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡರಾದ ಶಂಕರ ಮಂಜು, ಅಬೀಬ್, ಸುಂದರೇಶ, ರೆಹಮತ್, ರಂಗಸ್ವಾಮಿ, ನಜೀರ್ ಇತರರು ಇದ್ದರು.

MANY DROPS MAKE AN OCEAN
Support NewsKarnataka's quality independent journalism with a small contribution.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *