News Karnataka
Saturday, June 10 2023
ರಾಜಕೀಯ

ಸ್ವರೂಪ್ ಪರ ಪ್ರಚಾರ ಆರಂಭಿಸಿದ ರೇವಣ್ಣ ಹಾಗೂ ಭವಾನಿ ರೇವಣ್ಣ

HD Revanna and Bhavani Revanna started campaigning on behalf of JDS candidate Swaroop Prakash from Hassan assembly constituency.
Photo Credit : Bharath

ಹಾಸನ: ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಪ್ರಕಾಶ್ ಪರ ಇಂದು ಮಾಜಿ ಸಚಿವ ಎಚ್. ಡಿ ರೇವಣ್ಣ ಹಾಗೂ ಭವಾನಿ ರೇವಣ್ಣ ಅಧಿಕೃತವಾಗಿ ಪ್ರಚಾರ ಆರಂಭಿಸಿದರು.

ನಗರದ ನೀರು ಬಾಗಿಲು ಆಂಜನೇಯ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ವಿಶೇಷವಾಗಿ ನಿರ್ಮಾಣ ಮಾಡಲಾಗಿರುವ ಜೆಡಿಎಸ್ ಪಕ್ಷದ ವಾಹನದಲ್ಲಿ ಪ್ರಚಾರ ಆರಂಭಿಸಿದ ಅಭ್ಯರ್ಥಿ ಸ್ವರೂಪ್ ಅವರಿಗೆ ಭವಾನಿ ರೇವಣ್ಣ, ಎಚ್. ಡಿ. ರೇವಣ್ಣ, ಕೆ.ಎಂ ರಾಜೇಗೌಡ, ಸಿ.ಆರ್ ಶಂಕರ್, ಅಕ್ಬರ್, ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಎಸ್ ದ್ಯಾವೇಗೌಡ, ಲೊಕೇಶ್ ಅಟ್ಟಾವರ, ವಕೀಲ ಯೋಗೀಶ್ ಸೇರಿದಂತೆ ಇತರ ನಾಯಕರು ಸಾಥ್ ನೀಡಿದರು.

ರ್‍ಯಾಲಿ ವೇಳೆ ನೂರಾರು ಸಂಖ್ಯೆಯಲ್ಲಿ ಮಹಿಳೆಯರು ಹಾಗೂ ಜೆಡಿಎಸ್ ಕಾರ್ಯಕರ್ತರು ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಭವಾನಿ ರೇವಣ್ಣ ಅವರು ಹಾಸನ ಜಿಲ್ಲೆಯ ಅಭಿವೃದ್ಧಿಗೆ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರು ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ. ನೂರಾರು ಕೋಟಿಗಳ ವೆಚ್ಚದಲ್ಲಿ ಇಂಜಿನಿಯರಿಂಗ್ ಕಾಲೇಜು, ಡಿಪ್ಲೋಮಾ ಕಾಲೇಜು, ಸರ್ಕಾರಿ ಮಕ್ಕಳ ಆಸ್ಪತ್ರೆ, ಹೈಟೆಕ್ ಆಸ್ಪತ್ರೆ ಸೇರಿದಂತೆ ಹಲವು ಯೋಜನೆಗಳನ್ನು ನೀಡಿದ ಕೀರ್ತಿ ಜೆಡಿಎಸ್ ಆಡಳಿತದಲ್ಲಿ ಸಲ್ಲುತ್ತದೆ ಎಂದರು.

ಬಿಜೆಪಿ ಆಡಳಿತದಂತೆ ನಗರದಲ್ಲಿ ಮಳೆ-ಗಾಳಿಗೆ ಬೀಳುವಂತಹ ತಗಡಿನ ಕಾಮಗಾರಿಗಳನ್ನು ಜೆಡಿಎಸ್ ಅಧಿಕಾರವಧಿಯಲ್ಲಿ ಮಾಡಿಲ್ಲ. ಹಾಸನ ಜಿಲ್ಲೆಯ ಸಂಪೂರ್ಣ ಅಭಿವೃದ್ಧಿಗೆ ಜೆಡಿಎಸ್ ಪಕ್ಷಕ್ಕೆ ಮತ ನೀಡುವಂತೆ ಹಾಗೂ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಸ್ವರೂಪ್ ಪ್ರಕಾಶ್ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು. ಆಂಜನೇಯ ದೇವಾಲಯದಿಂದ ಆರಂಭಗೊಂಡ ರ್‍ಯಾಲಿಯು ಎನ್.ಆರ್ ವೃತ್ತದ ಮೂಲಕ ಸಂಚರಿಸಿ ಹೇಮಾವತಿ ಪ್ರತಿಮೆ ನಂತರ ಆರ್‌ಸಿ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಸ್ವರೂಪ್ ಪರ ಮತಯಾಚನೆ ಮಾಡಲಾಯಿತು.

MANY DROPS MAKE AN OCEAN
Support NewsKarnataka's quality independent journalism with a small contribution.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *