ಹಾಸನ: ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವ ರದ್ದುಗೊಳಿಸಿರುವ ಕ್ರಮ ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಸದಸ್ಯರು ಇಂದು ಪ್ರತಿಭಟನೆ ನಡೆಸಿದರು.
ನಗರದ ಡಾ. ಅಂಬೇಡ್ಕರ್ ಪ್ರತಿಮೆ ಬಳಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ಕುಳಿತ ಸದಸ್ಯರು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರದ ಅಹಂಕಾರದಲ್ಲಿರುವ ಬಿಜೆಪಿ ಸರ್ಕಾರ ಸಾಮಾನ್ಯ ಜನತೆಗೆ ಅನ್ಯಾಯ ಮಾಡುತ್ತಿದೆ. ಆಡಳಿತ ವೈಫಲ್ಯಗಳ ವಿರುದ್ಧ ಮಾತನಾಡುವ ವಿರೋಧ ಪಕ್ಷದ ನಾಯಕರ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಹೇಳಿ, ಕೇಸು ಹಾಕಿಸಲಾಗುತ್ತದೆ. ಅದರಂತೆ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯ ಸ್ಥಾನ ರದ್ದು ಮಾಡಿದ್ದಾರೆ ಎಂದು ಆರೋಪಿಸಿದರು.
ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ರಂಜಿತ್ ಗೊರೂರು , ಎಸ್.ಸಿ/ಎಸ್.ಟಿ ಕಾಂಗ್ರೆಸ್ ಘಟಕದ ಅಧ್ಯಕ್ಷ ಮಲ್ಲಿಗೆವಾಳು ದೇವಪ್ಪ, ಅಶೋಕ, ಮುಬಷಿರ್ ಸೇರಿದಂತೆ ಇತರೆ ಕಾರ್ಯಕರ್ತರು ಭಾಗವಹಿಸಿದ್ದರು.