News Karnataka
ವಿಶೇಷ

ಅಕ್ಕಮಹಾದೇವಿ ಮಹಿಳೆಯರ ಬದುಕಿಗೆ ಆದರ್ಶ

Akkamahadevi Jayanti program was celebrated at the taluk Administration building by the National Festival Celebration Committee.
Photo Credit : Bharath

ಬೇಲೂರು: ಸಮಾಜದಲ್ಲಿ ಮಹಿಳೆಯರಿಗೂ ಪುರುಷರಷ್ಟೇ ಸರಿಸಮಾನ ಸ್ಥಾನಮಾನ ಕಲ್ಪಿಸಬೇಕೆಂದು 12ನೇ ಶತಮಾನದಲ್ಲಿಯೇ ಹೋರಾಟ ಮಾಡಿದ ಧೀರ ವನಿತೆ ಅಕ್ಕಮಹಾದೇವಿಯು ಇಂದಿನ ಮಹಿಳೆಯರ ಬದುಕಿಗೆ ಆದರ್ಶ ಎಂದು ತಹಶೀಲ್ದಾರ್ ಎಂ.ಮಮತಾ ಹೇಳಿದರು.

ರಾಷ್ಟ್ರೀಯ ಹಬ್ಬದ ಆಚರಣೆ ಸಮಿತಿ ವತಿಯಿಂದ ತಾಲೂಕು ಆಡಳಿತ ಸೌಧದಲ್ಲಿ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿಧಾನ ಸಭಾ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸಾಂಕೇತಿಕವಾಗಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸರಳವಾಗಿ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದೆ. ಸಮಾಜದಲ್ಲಿ ಸಾಮರಸ್ಯ ಮೂಡಿಸಲು, ಅಂಕುಡೊಂಕುಗಳನ್ನು ತಿದ್ದಲು ಶ್ರಮಿಸಿದ ಅಕ್ಕಮಹಾದೇವಿಯವರ ಹೆಸರು ಇತಿಹಾಸದ ಪುಟದಲ್ಲಿ ಉಳಿದುಕೊಂಡಿದ್ದು, ಅವರ ಆದರ್ಶಗಳು ಇಂದಿನ ಮಹಿಳೆಯರಿಗೆ ದಾರಿದೀಪವಾಗಿದೆ ಎಂದರು.

ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ಸಿಬ್ಬಂದಿಗಳು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

MANY DROPS MAKE AN OCEAN
Support NewsKarnataka's quality independent journalism with a small contribution.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *